25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ಶಿಕ್ಷಕರು ಅಂಧಕಾರದಿಂದ ಜ್ಞಾನದೆಡೆಗೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತಾರೆ.ಆದರೆ ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ಅದರ ಬಳಕೆಯ ಕುರಿತು ತಿಳಿದುಕೊಳ್ಳುವುದು ಉತ್ತಮ. ಪ್ರತಿಯೊಬ್ಬನಲ್ಲೂ ಸುಪ್ತವಾಗಿರುವ ಜ್ಞಾನವನ್ನು ಬಳಸಿಕೊಂಡು ಸಾರ್ವಕಾಲಿಕ ಸತ್ಯಗಳಾದ ದಯೆ, ಕರುಣೆ, ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ನೋಡಿಕೊಳ್ಳವಂತಾಗಬೇಕು ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೇಶವ.ಟಿ.ಎನ್ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ರೆನಿಶಾ ವೇಗಸ್ ಸ್ವಾಗತಿಸಿ, ಉಪನಿರ್ದೇಶಕಿ ಅನು ವಂದಿಸಿ, ವಿದ್ಯಾರ್ಥಿ ನಾಯಕ ಶಾಶ್ವತ್ ಪ್ರೀತಂ ಅನಿಸಿಕೆ ಹಂಚಿಕೊಂಡರು. ವಿದ್ಯಾರ್ಥಿಗಳಾದ ಅವಿನ್ ಹಾಗೂ ಜೊತ್ಸ್ನ್ ಜೋಸ್ ಕಾರ್ಯಕ್ರಮ ನಿರೂಪಿಸಿದರು,.

Related posts

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!