23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ರೆಖ್ಯ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ( 75 ) ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ, ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರೆಖ್ಯ ಗ್ರಾಮದ ಎಂಜಿರ, ನೇಲ್ಯಡ್ಕ, ಪರಕ್ಕಳದಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದ್ದು ಎಂಜಿರದಲ್ಲಿ ಸರ್ವಿಸ್ ರಸ್ತೆ ಮಾಡಿಲ್ಲ , ರಸ್ತೆ ಮಧ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು / ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವ0ತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ , ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ , ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್ ಗುಡ್ಡ ವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡದೆ ಇರುವ ಹಿನ್ನಲೆಯಲ್ಲಿ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗ್ರಾಮಸ್ಥರೆಲ್ಲರು ಒಟ್ಟಾಗಿ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related posts

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!