July 23, 2026
ವರದಿ

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ರೆಖ್ಯ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ( 75 ) ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ, ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರೆಖ್ಯ ಗ್ರಾಮದ ಎಂಜಿರ, ನೇಲ್ಯಡ್ಕ, ಪರಕ್ಕಳದಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದ್ದು ಎಂಜಿರದಲ್ಲಿ ಸರ್ವಿಸ್ ರಸ್ತೆ ಮಾಡಿಲ್ಲ , ರಸ್ತೆ ಮಧ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು / ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವ0ತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ , ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ , ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್ ಗುಡ್ಡ ವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡದೆ ಇರುವ ಹಿನ್ನಲೆಯಲ್ಲಿ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗ್ರಾಮಸ್ಥರೆಲ್ಲರು ಒಟ್ಟಾಗಿ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related posts

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya
error: Content is protected !!