25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ರೆಖ್ಯ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ( 75 ) ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ, ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರೆಖ್ಯ ಗ್ರಾಮದ ಎಂಜಿರ, ನೇಲ್ಯಡ್ಕ, ಪರಕ್ಕಳದಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದ್ದು ಎಂಜಿರದಲ್ಲಿ ಸರ್ವಿಸ್ ರಸ್ತೆ ಮಾಡಿಲ್ಲ , ರಸ್ತೆ ಮಧ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು / ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವ0ತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ , ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ , ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್ ಗುಡ್ಡ ವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡದೆ ಇರುವ ಹಿನ್ನಲೆಯಲ್ಲಿ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗ್ರಾಮಸ್ಥರೆಲ್ಲರು ಒಟ್ಟಾಗಿ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related posts

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!