23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಉಜಿರೆ : ಶ್ರೀ. ಧ. ಮಂ.ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು. ಮಂಗಳೂರು ಪಿರೇರಿಯನ್ ಸರ್ವಿಸಸ್ ನ ಮ್ಯಾನೇಜರ್ ಹಾಗೂ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಸಿ. ಎ. ಸುಕನ್ಯಾ ಕಾಮತ್ ಉದ್ಘಾಟನೆ ನೆರವೇರಿಸಿ ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಇವರು ಅಯ್ಕೆಯ ವಿಷಯದಲ್ಲಿ ಇತರ ವಿಧ್ಯಾರ್ಥಿಗಳ ಆಯ್ಕೆಯನ್ನು ಸ್ವೀಕರಿಸುವುದಕ್ಕಿಂತ ತಮಗೆ ಸಮಂಜಸವಾದ ಅಯ್ಕೆಯನ್ನು ಸ್ವೀಕರಿಸಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯಬೇಕು. ಇಂದು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಲವಾರು ವ್ಯತ್ತಿ ಅವಕಾಶಗಳಿವೆ ಆದರೆ ಕೌಶಲ್ಯಕ್ಕೆ ಮಹತ್ವ ನೀಡಿದರೆ ಮಾತ್ರ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫ್ರೊಪೆಸರ್ ಪ್ರಮೋದ್ ಕುಮಾರ್ ವಹಿಸಿದ್ದರು. ಇದರು ಬಡತನದಿಂದ ಮೇಲೆ ಬಂದು ವ್ಯತ್ತಿಯಿಂದ ಶೇರು ಮಾರುಕಟ್ಟೆಯನ್ನು ಆಳಿದ ಹಲವಾರು ಶ್ರೀಮಂತರ ಸಾಹಸಗಾತೆಯನ್ನು ವಿವರಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥೆ ಬೇಬಿ ಎನ್. ಸಂಯೋಜಕಿ ಸವಿತ ಉಪನ್ಯಾಸಕಿಯರಾದ ಪ್ರಭಾವತಿ, ಶೋಭ ಹಾಗೂ ಅಶ್ವಿನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಧ್ಯಾರ್ಥಿನಿ ಅನಿಕ ತಂಡ ಪ್ರಾರ್ಥಿಸಿ ಸಂಘದ ಅಧ್ಯಕ್ಷ ಧರ್ಮತೇಜ ಸ್ವಾಗತಿಸಿ ಕಾರ್ಯದರ್ಶಿ ಸಿರಿ ಧನ್ಯವಾದ ನೀಡಿದರು. ವಿದ್ಯಾರ್ಥಿನಿಯರಾದ ಹಂಸಿನಿ ಭಿಡೆ ಹಾಗೂ ಅಂಶುಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya
error: Content is protected !!