September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಉಜಿರೆ : ಶ್ರೀ. ಧ. ಮಂ.ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು. ಮಂಗಳೂರು ಪಿರೇರಿಯನ್ ಸರ್ವಿಸಸ್ ನ ಮ್ಯಾನೇಜರ್ ಹಾಗೂ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಸಿ. ಎ. ಸುಕನ್ಯಾ ಕಾಮತ್ ಉದ್ಘಾಟನೆ ನೆರವೇರಿಸಿ ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಇವರು ಅಯ್ಕೆಯ ವಿಷಯದಲ್ಲಿ ಇತರ ವಿಧ್ಯಾರ್ಥಿಗಳ ಆಯ್ಕೆಯನ್ನು ಸ್ವೀಕರಿಸುವುದಕ್ಕಿಂತ ತಮಗೆ ಸಮಂಜಸವಾದ ಅಯ್ಕೆಯನ್ನು ಸ್ವೀಕರಿಸಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯಬೇಕು. ಇಂದು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಲವಾರು ವ್ಯತ್ತಿ ಅವಕಾಶಗಳಿವೆ ಆದರೆ ಕೌಶಲ್ಯಕ್ಕೆ ಮಹತ್ವ ನೀಡಿದರೆ ಮಾತ್ರ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫ್ರೊಪೆಸರ್ ಪ್ರಮೋದ್ ಕುಮಾರ್ ವಹಿಸಿದ್ದರು. ಇದರು ಬಡತನದಿಂದ ಮೇಲೆ ಬಂದು ವ್ಯತ್ತಿಯಿಂದ ಶೇರು ಮಾರುಕಟ್ಟೆಯನ್ನು ಆಳಿದ ಹಲವಾರು ಶ್ರೀಮಂತರ ಸಾಹಸಗಾತೆಯನ್ನು ವಿವರಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥೆ ಬೇಬಿ ಎನ್. ಸಂಯೋಜಕಿ ಸವಿತ ಉಪನ್ಯಾಸಕಿಯರಾದ ಪ್ರಭಾವತಿ, ಶೋಭ ಹಾಗೂ ಅಶ್ವಿನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಧ್ಯಾರ್ಥಿನಿ ಅನಿಕ ತಂಡ ಪ್ರಾರ್ಥಿಸಿ ಸಂಘದ ಅಧ್ಯಕ್ಷ ಧರ್ಮತೇಜ ಸ್ವಾಗತಿಸಿ ಕಾರ್ಯದರ್ಶಿ ಸಿರಿ ಧನ್ಯವಾದ ನೀಡಿದರು. ವಿದ್ಯಾರ್ಥಿನಿಯರಾದ ಹಂಸಿನಿ ಭಿಡೆ ಹಾಗೂ ಅಂಶುಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!