30.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿಧಾರ್ಮಿಕವರದಿಸಂಘ-ಸಂಸ್ಥೆಗಳು

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಮಾಸಿಕ ಸಭೆಯು ಜೂ.29ರಂದು ಸಂಘದ ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ರಾಘವೇಂದ್ರ ರವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್‌ ಎಚ್‌. ಎಲ್‌. ವಹಿಸಿದ್ದರು.

ತಾಲೂಕು ಮರಾಟಿ ಸಂಘದಿಂದ ಇದೇ ಪ್ರಥಮ ಬಾರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಅ.12ರಂದು ಗುರುವಾಯನಕೆರೆಯ ಹವ್ಯಕ ಭವನದಲ್ಲಿ ನಡೆಸುವುದೆಂದು ನಿರ್ಧರಿಸಲಾಯಿತು. ಅದೇ ದಿನ ವಾರ್ಷಿಕ ಮಹಾಸಭೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚಿಸಲಾಯಿತು. ತಾಲೂಕಿನ ಮರಾಟಿ ಸಮಾಜದ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಸಂಘಕ್ಕೆ ತಮ್ಮ ಅಂಕ ಪಟ್ಟಿಯೊಂದಿಗೆ ಮಾಹಿತಿ ನೀಡುವಂತೆ ವಿನಂತಿಸಲಾಯಿತು.

ಸಭೆಯಲ್ಲಿ ಗೌರವಾಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷರಾದ ವಸಂತ ನಾಯ್ಕ, ಪ್ರಭಾಕರ ನಾಯ್ಕ, ಕಾರ್ಯದರ್ಶಿಗಳಾದ ಸುರೇಶ್ ಎಚ್. ಎಲ್., ಪವಿತ್ರಾ ಲೋಕೇಶ್, ಕೋಶಾಧಿಕಾರಿ ಹರೀಶ್ ಪೆರಾಜೆ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ನಾಯ್ಕ, ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ ಬಡಕೋಡಿ, ಮಾಧ್ಯಮ ಕಾರ್ಯದರ್ಶಿ ಶರತ್ ನಾಯ್ಕ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಕಾರ್ಯಕಾರಿ ಸಮಿತಿ ಸದಸ್ಯರಾದ ರಜನೀಶ್ ನಾಯ್ಕ, ಚಂದ್ರಾವತಿ, ವಿಶಾಲ ಹಾಗೂ ಇತರರು ಭಾಗವಹಿಸಿದ್ದರು. ರಾಘವೇಂದ್ರ ನಾಯ್ಕ ಸ್ವಾಗತಿಸಿ, ಶರತ್ ನಾಯ್ಕ ವಂದಿಸಿದರು.

Related posts

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya
error: Content is protected !!