25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಧಾರ್ಮಿಕವರದಿಸಂಘ-ಸಂಸ್ಥೆಗಳು

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಮಾಸಿಕ ಸಭೆಯು ಜೂ.29ರಂದು ಸಂಘದ ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ರಾಘವೇಂದ್ರ ರವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್‌ ಎಚ್‌. ಎಲ್‌. ವಹಿಸಿದ್ದರು.

ತಾಲೂಕು ಮರಾಟಿ ಸಂಘದಿಂದ ಇದೇ ಪ್ರಥಮ ಬಾರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಅ.12ರಂದು ಗುರುವಾಯನಕೆರೆಯ ಹವ್ಯಕ ಭವನದಲ್ಲಿ ನಡೆಸುವುದೆಂದು ನಿರ್ಧರಿಸಲಾಯಿತು. ಅದೇ ದಿನ ವಾರ್ಷಿಕ ಮಹಾಸಭೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚಿಸಲಾಯಿತು. ತಾಲೂಕಿನ ಮರಾಟಿ ಸಮಾಜದ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಸಂಘಕ್ಕೆ ತಮ್ಮ ಅಂಕ ಪಟ್ಟಿಯೊಂದಿಗೆ ಮಾಹಿತಿ ನೀಡುವಂತೆ ವಿನಂತಿಸಲಾಯಿತು.

ಸಭೆಯಲ್ಲಿ ಗೌರವಾಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷರಾದ ವಸಂತ ನಾಯ್ಕ, ಪ್ರಭಾಕರ ನಾಯ್ಕ, ಕಾರ್ಯದರ್ಶಿಗಳಾದ ಸುರೇಶ್ ಎಚ್. ಎಲ್., ಪವಿತ್ರಾ ಲೋಕೇಶ್, ಕೋಶಾಧಿಕಾರಿ ಹರೀಶ್ ಪೆರಾಜೆ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ನಾಯ್ಕ, ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ ಬಡಕೋಡಿ, ಮಾಧ್ಯಮ ಕಾರ್ಯದರ್ಶಿ ಶರತ್ ನಾಯ್ಕ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಕಾರ್ಯಕಾರಿ ಸಮಿತಿ ಸದಸ್ಯರಾದ ರಜನೀಶ್ ನಾಯ್ಕ, ಚಂದ್ರಾವತಿ, ವಿಶಾಲ ಹಾಗೂ ಇತರರು ಭಾಗವಹಿಸಿದ್ದರು. ರಾಘವೇಂದ್ರ ನಾಯ್ಕ ಸ್ವಾಗತಿಸಿ, ಶರತ್ ನಾಯ್ಕ ವಂದಿಸಿದರು.

Related posts

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya
error: Content is protected !!