September 6, 2026
Uncategorized

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಚರ್ಚ್ ಸಮೀಪ ಬೃಹತ್ ಗಾತ್ರದ ಮರ ರಸ್ತೆ ಮತ್ತು ವಿದ್ಯುತ್ ಲೈನ್ ಮೇಲೆ ಉರುಳಿ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಇಂದು (ಜು.2 )ನಡೆದಿದೆ.


ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನಿಂದ ಮುಂಡಾಜೆ ಫೀಡರ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಚ್ ಟಿ ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಮುಂಡಾಜೆ, ಸೋಮಂತಡ್ಕ, ಕಡಂಬಳ್ಳಿ, ಕಾಯರ್ತೋಡಿ, ಕೊಡಂಗೆ,ಕಲ್ಲಾರ್ಯ, ಅಂಬಡ್ತ್ಯಾರು, ನೆಯ್ಯಾಲು, ಮೂಲಾರು, ಕುಡೆಂಚಿ, ಆಸುಪಾಸಿನಲ್ಲಿ ನೂರಾರು ಗ್ರಾಹಕರಿಗೆ ವಿದ್ಯುತ್ ವ್ಯತಯ ಉಂಟಾಗಿದೆ.


ಮರವು ರಸ್ತೆಗೂ ಉರುಳಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ಗ್ರಾಪಂ ಸದಸ್ಯ ಗಣೇಶ ಬಂಗೇರ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಮೆಸ್ಕಾಂ,ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು. ಮರ ಉರುಳಿ ಬೀಳುವ ವೇಳೆ ವಾಹನಗಳ ಸಂಚಾರ ಇರದಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ.

Related posts

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya
error: Content is protected !!