July 23, 2026
Uncategorized

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಚರ್ಚ್ ಸಮೀಪ ಬೃಹತ್ ಗಾತ್ರದ ಮರ ರಸ್ತೆ ಮತ್ತು ವಿದ್ಯುತ್ ಲೈನ್ ಮೇಲೆ ಉರುಳಿ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಇಂದು (ಜು.2 )ನಡೆದಿದೆ.


ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನಿಂದ ಮುಂಡಾಜೆ ಫೀಡರ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಚ್ ಟಿ ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಮುಂಡಾಜೆ, ಸೋಮಂತಡ್ಕ, ಕಡಂಬಳ್ಳಿ, ಕಾಯರ್ತೋಡಿ, ಕೊಡಂಗೆ,ಕಲ್ಲಾರ್ಯ, ಅಂಬಡ್ತ್ಯಾರು, ನೆಯ್ಯಾಲು, ಮೂಲಾರು, ಕುಡೆಂಚಿ, ಆಸುಪಾಸಿನಲ್ಲಿ ನೂರಾರು ಗ್ರಾಹಕರಿಗೆ ವಿದ್ಯುತ್ ವ್ಯತಯ ಉಂಟಾಗಿದೆ.


ಮರವು ರಸ್ತೆಗೂ ಉರುಳಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ಗ್ರಾಪಂ ಸದಸ್ಯ ಗಣೇಶ ಬಂಗೇರ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಮೆಸ್ಕಾಂ,ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು. ಮರ ಉರುಳಿ ಬೀಳುವ ವೇಳೆ ವಾಹನಗಳ ಸಂಚಾರ ಇರದಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya
error: Content is protected !!