25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!