September 6, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya
error: Content is protected !!