ಗ್ರಾಮಾಂತರ ಸುದ್ದಿ

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

ನೆರಿಯ :ಉದಯ ಮಹಾಸಂಘ ಗಂಡಿಬಾಗಿಲು ಇದರ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜು 01ರಂದು ಸಂತ ಥೋಮಸ್ ಚರ್ಚ್ ಸಭಾಂಗಣ ಗಂಡಿಬಾಗಿಲು ಇಲ್ಲಿ ಆಯೋಜಿಸಲಾಗಿತ್ತು

. ಉದಯ ಮಹಾಸಂಘದ ಉಪಾಧ್ಯಕ್ಷರಾದ ಶ್ರೀಮತಿ ಮೇರಿ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ವಂ.ಫಾ. ಜೋಸ್ ಆಯಾಂಕುಡಿ, ಸ್ಥಳೀಯ ಧರ್ಮಗುರುಗಳು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇವರು ಪರಿಸರವನ್ನು ಉಳಿಸಿಕೊಳ್ಳಲು ತೆಗೆದು ಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸ್ನೇಹಜ್ಯೋತಿ ತಾಲೂಕು ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್, ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಎಲಿಯಮ್ಮ ತೋಮಸ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮರಿಯಮ್ಮ ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ನಂತರ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶ್ರೀಮತಿ ಉಷಾ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಮಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಜನಜಾತಿಯ ಗರಿಮಾ ಉತ್ಸವ – 2026

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya
error: Content is protected !!