22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆದಲ್ಲಿ ಕಾರಿನಲ್ಲಿಯೇ ಮಹಿಳೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜು.1ರಂದು ನಡೆದಿದೆ.

ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಎಂಬುವರು ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ದಾರಿ ಮಧ್ಯೆಯೇ ಕಾರಿನಲ್ಲೇ ಮಹಿಳೆಗೆ ಹೆರಿಗೆಯಾದ ಘಟನೆ ವೈದ್ಯರದಿನದಂದು ನಡೆದಿದೆ. ತಾಯಿ ಮಗು ಇಬ್ಬರೂ ಸುರಕ್ಷಿತರಾಗಿದ್ದು ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಆರೈಕೆಯಲ್ಲಿದ್ದಾರೆ.

ಸುನ್ನತ್‌ಕೆರೆ ನಿವಾಸಿ ಇಕ್ಬಾಲ್ ಅವರ ಪತ್ನಿ ತುಂಬು ಗರ್ಬಿಣಿ ಸಫಿಯಾ ಅಳದಂಗಡಿ ಅವರು ತೀವ್ರವಾದ ಹೆರಿಗೆ ನೋವಿನೊಂದಿಗೆ ರಸ್ತೆ ಬದಿನಿಂತುಕೊAಡಿದ್ದರು. ಇದನ್ನು ಗಮನಿಸಿದ ಜಮಾಲ್ ಅವರು ತನ್ನ ಕಾರನ್ನು ತಿರುಗಿಸಿ ಬಂದು ವಿಚಾರಿಸಿದರು. ದಂಪತಿಯ ಸಂಕಷ್ಟ ಅರಿತ ಅವರು ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಕುಳ್ಳಿರಿಸಿ ಆಸ್ಪತ್ರೆಯತ್ತ ಪ್ರಯಾಣ ಬೆಳೆಸಿದರು. ಆದರೆ ಅದಾಗಲೇ ಸಫಿಯಾ ಅವರು ಕಾರಿನಲ್ಲೇ ಪ್ರಸವಿಸಿದ್ದಾರೆ. ಪ್ರಸವದ ವೇಳೆ ಪತಿ ಇಕ್ಬಾಲ್ ಮತ್ತು ಜಮಾಲ್ ಅವರು ಮಹಿಳೆಗೆ ತುರ್ತು ಸ್ಪಂದಿಸಿದ್ದು ಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರ ದಿನದಂದು ಸಫಿಯಾ ಪಾಲಿಗೆ ಪತಿ ಮತ್ತು ಜಮಾಲ್ ವೈದ್ಯರಂತೆ ಕಂಡಿರುವುದು ಸತ್ಯ. ಜಮಾಲ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya
error: Content is protected !!