37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

ಬೆಳ್ತಂಗಡಿ: ಕೆಂಪು ಕಲ್ಲು ಮತ್ತು ಮರಳು ಇವೆರಡನ್ನೂ ಉಪಯೋಗಿಸಿಕೊಂಡು ಮಾಡುವ ಕೆಲಸ ಕಾರ್ಯಗಳಿಗೆ ಸಾವಿರಾರು ಕಾರ್ಮಿಕರು ಅವಲಂಬಿತವಾಗಿದ್ದು ಇದೀಗ ಕೆಲಸವಿಲ್ಲದೆ ಟಿಪ್ಪರ್ ಚಾಲಕ-ಮಾಲಕರಿಗೆ ಸಮಸ್ಯೆಯಾಗಿದೆ ಎಂದು ಯುವ ಉದ್ಯಮಿ ಬಳಂಜ ಪ್ರವೀಣ್ ಪೂಜಾರಿ ಹೇಳಿದ್ದಾರೆ.

ಇವುಗಳ ಸಾಗಾಟದ ವಾಹನದ ಮೇಲೆ ಅದೆಷ್ಟು ಸಾಲ ಇನ್ಸುರೆನ್ಸ್, ಟ್ಯಾಕ್ಸ್, ಕಟ್ಟಿ ತಮ್ಮ ವಾಹನಗಳನ್ನು ಮಾಲಕರು ಮನೆಯಲ್ಲಿಯೇ ನಿಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರತಿಯೊಬ್ಬರೂ ಉಪಯೋಗಿಸಲ್ಪಡುವ ಇಂತಹ ಅಗತ್ಯ ವಸ್ತುಗಳ ಮೇಲಾಗಿರುವ ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಮತಿ ನೀಡುವಂತೆ ಕಾನೂನು ಮಾಡಬೇಕಾಗಿರುವುದು ಉತ್ತಮ.ಒಂದು ವೇಳೆ ಅನುಮತಿ ನೀಡಲು ವಿಳಂಬವಾಗಿ ಇದೇ ಪರಿಸ್ಥಿತಿ ಮುಂದುವರೆದರೆ ಅದೆಷ್ಟು ಕೂಲಿ ಕಾರ್ಮಿಕರು, ಮೇಸ್ತ್ರಿ ಕೆಲಸ, ವೈರಿಂಗ್ ಕೆಲಸದವರು,ಹಾರ್ಡ್‌ವೇರ್ ಅಂಗಡಿಯವರು,ಪೈಂಟ್ ಕೆಲಸದವರು, ಇನ್ನು ಹಲವಾರು ಕಾರ್ಮಿಕರು ತಮ್ಮ ದುಡಿಮೆಯನ್ನು ನಂಬಿಕೊಂಡು ಸಾಲ ಮಾಡಿ ದುಡಿಮೆಯಿಲ್ಲದೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.ಜನಪರ ಕಾಳಜಿಯಿಂದ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಆದಷ್ಟು ಬೇಗ ಅನುಮತಿಯನ್ನು ನೀಡಿ ಕಾರ್ಮಿಕ ವರ್ಗಕ್ಕೆ ಧೈರ್ಯ ತುಂಬಬೇಕಾಗಿದೆ ಎಂದವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
error: Content is protected !!