24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

ಬೆಳ್ತಂಗಡಿ: ಕೆಂಪು ಕಲ್ಲು ಮತ್ತು ಮರಳು ಇವೆರಡನ್ನೂ ಉಪಯೋಗಿಸಿಕೊಂಡು ಮಾಡುವ ಕೆಲಸ ಕಾರ್ಯಗಳಿಗೆ ಸಾವಿರಾರು ಕಾರ್ಮಿಕರು ಅವಲಂಬಿತವಾಗಿದ್ದು ಇದೀಗ ಕೆಲಸವಿಲ್ಲದೆ ಟಿಪ್ಪರ್ ಚಾಲಕ-ಮಾಲಕರಿಗೆ ಸಮಸ್ಯೆಯಾಗಿದೆ ಎಂದು ಯುವ ಉದ್ಯಮಿ ಬಳಂಜ ಪ್ರವೀಣ್ ಪೂಜಾರಿ ಹೇಳಿದ್ದಾರೆ.

ಇವುಗಳ ಸಾಗಾಟದ ವಾಹನದ ಮೇಲೆ ಅದೆಷ್ಟು ಸಾಲ ಇನ್ಸುರೆನ್ಸ್, ಟ್ಯಾಕ್ಸ್, ಕಟ್ಟಿ ತಮ್ಮ ವಾಹನಗಳನ್ನು ಮಾಲಕರು ಮನೆಯಲ್ಲಿಯೇ ನಿಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರತಿಯೊಬ್ಬರೂ ಉಪಯೋಗಿಸಲ್ಪಡುವ ಇಂತಹ ಅಗತ್ಯ ವಸ್ತುಗಳ ಮೇಲಾಗಿರುವ ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಮತಿ ನೀಡುವಂತೆ ಕಾನೂನು ಮಾಡಬೇಕಾಗಿರುವುದು ಉತ್ತಮ.ಒಂದು ವೇಳೆ ಅನುಮತಿ ನೀಡಲು ವಿಳಂಬವಾಗಿ ಇದೇ ಪರಿಸ್ಥಿತಿ ಮುಂದುವರೆದರೆ ಅದೆಷ್ಟು ಕೂಲಿ ಕಾರ್ಮಿಕರು, ಮೇಸ್ತ್ರಿ ಕೆಲಸ, ವೈರಿಂಗ್ ಕೆಲಸದವರು,ಹಾರ್ಡ್‌ವೇರ್ ಅಂಗಡಿಯವರು,ಪೈಂಟ್ ಕೆಲಸದವರು, ಇನ್ನು ಹಲವಾರು ಕಾರ್ಮಿಕರು ತಮ್ಮ ದುಡಿಮೆಯನ್ನು ನಂಬಿಕೊಂಡು ಸಾಲ ಮಾಡಿ ದುಡಿಮೆಯಿಲ್ಲದೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.ಜನಪರ ಕಾಳಜಿಯಿಂದ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಆದಷ್ಟು ಬೇಗ ಅನುಮತಿಯನ್ನು ನೀಡಿ ಕಾರ್ಮಿಕ ವರ್ಗಕ್ಕೆ ಧೈರ್ಯ ತುಂಬಬೇಕಾಗಿದೆ ಎಂದವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!