September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

ಬೆಳ್ತಂಗಡಿ: ಕೆಂಪು ಕಲ್ಲು ಮತ್ತು ಮರಳು ಇವೆರಡನ್ನೂ ಉಪಯೋಗಿಸಿಕೊಂಡು ಮಾಡುವ ಕೆಲಸ ಕಾರ್ಯಗಳಿಗೆ ಸಾವಿರಾರು ಕಾರ್ಮಿಕರು ಅವಲಂಬಿತವಾಗಿದ್ದು ಇದೀಗ ಕೆಲಸವಿಲ್ಲದೆ ಟಿಪ್ಪರ್ ಚಾಲಕ-ಮಾಲಕರಿಗೆ ಸಮಸ್ಯೆಯಾಗಿದೆ ಎಂದು ಯುವ ಉದ್ಯಮಿ ಬಳಂಜ ಪ್ರವೀಣ್ ಪೂಜಾರಿ ಹೇಳಿದ್ದಾರೆ.

ಇವುಗಳ ಸಾಗಾಟದ ವಾಹನದ ಮೇಲೆ ಅದೆಷ್ಟು ಸಾಲ ಇನ್ಸುರೆನ್ಸ್, ಟ್ಯಾಕ್ಸ್, ಕಟ್ಟಿ ತಮ್ಮ ವಾಹನಗಳನ್ನು ಮಾಲಕರು ಮನೆಯಲ್ಲಿಯೇ ನಿಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರತಿಯೊಬ್ಬರೂ ಉಪಯೋಗಿಸಲ್ಪಡುವ ಇಂತಹ ಅಗತ್ಯ ವಸ್ತುಗಳ ಮೇಲಾಗಿರುವ ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಮತಿ ನೀಡುವಂತೆ ಕಾನೂನು ಮಾಡಬೇಕಾಗಿರುವುದು ಉತ್ತಮ.ಒಂದು ವೇಳೆ ಅನುಮತಿ ನೀಡಲು ವಿಳಂಬವಾಗಿ ಇದೇ ಪರಿಸ್ಥಿತಿ ಮುಂದುವರೆದರೆ ಅದೆಷ್ಟು ಕೂಲಿ ಕಾರ್ಮಿಕರು, ಮೇಸ್ತ್ರಿ ಕೆಲಸ, ವೈರಿಂಗ್ ಕೆಲಸದವರು,ಹಾರ್ಡ್‌ವೇರ್ ಅಂಗಡಿಯವರು,ಪೈಂಟ್ ಕೆಲಸದವರು, ಇನ್ನು ಹಲವಾರು ಕಾರ್ಮಿಕರು ತಮ್ಮ ದುಡಿಮೆಯನ್ನು ನಂಬಿಕೊಂಡು ಸಾಲ ಮಾಡಿ ದುಡಿಮೆಯಿಲ್ಲದೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.ಜನಪರ ಕಾಳಜಿಯಿಂದ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಆದಷ್ಟು ಬೇಗ ಅನುಮತಿಯನ್ನು ನೀಡಿ ಕಾರ್ಮಿಕ ವರ್ಗಕ್ಕೆ ಧೈರ್ಯ ತುಂಬಬೇಕಾಗಿದೆ ಎಂದವರು ತಿಳಿಸಿದ್ದಾರೆ.

Related posts

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
error: Content is protected !!