22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

ಬೆಳ್ತಂಗಡಿ: ಕೆಂಪು ಕಲ್ಲು ಮತ್ತು ಮರಳು ಇವೆರಡನ್ನೂ ಉಪಯೋಗಿಸಿಕೊಂಡು ಮಾಡುವ ಕೆಲಸ ಕಾರ್ಯಗಳಿಗೆ ಸಾವಿರಾರು ಕಾರ್ಮಿಕರು ಅವಲಂಬಿತವಾಗಿದ್ದು ಇದೀಗ ಕೆಲಸವಿಲ್ಲದೆ ಟಿಪ್ಪರ್ ಚಾಲಕ-ಮಾಲಕರಿಗೆ ಸಮಸ್ಯೆಯಾಗಿದೆ ಎಂದು ಯುವ ಉದ್ಯಮಿ ಬಳಂಜ ಪ್ರವೀಣ್ ಪೂಜಾರಿ ಹೇಳಿದ್ದಾರೆ.

ಇವುಗಳ ಸಾಗಾಟದ ವಾಹನದ ಮೇಲೆ ಅದೆಷ್ಟು ಸಾಲ ಇನ್ಸುರೆನ್ಸ್, ಟ್ಯಾಕ್ಸ್, ಕಟ್ಟಿ ತಮ್ಮ ವಾಹನಗಳನ್ನು ಮಾಲಕರು ಮನೆಯಲ್ಲಿಯೇ ನಿಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರತಿಯೊಬ್ಬರೂ ಉಪಯೋಗಿಸಲ್ಪಡುವ ಇಂತಹ ಅಗತ್ಯ ವಸ್ತುಗಳ ಮೇಲಾಗಿರುವ ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಮತಿ ನೀಡುವಂತೆ ಕಾನೂನು ಮಾಡಬೇಕಾಗಿರುವುದು ಉತ್ತಮ.ಒಂದು ವೇಳೆ ಅನುಮತಿ ನೀಡಲು ವಿಳಂಬವಾಗಿ ಇದೇ ಪರಿಸ್ಥಿತಿ ಮುಂದುವರೆದರೆ ಅದೆಷ್ಟು ಕೂಲಿ ಕಾರ್ಮಿಕರು, ಮೇಸ್ತ್ರಿ ಕೆಲಸ, ವೈರಿಂಗ್ ಕೆಲಸದವರು,ಹಾರ್ಡ್‌ವೇರ್ ಅಂಗಡಿಯವರು,ಪೈಂಟ್ ಕೆಲಸದವರು, ಇನ್ನು ಹಲವಾರು ಕಾರ್ಮಿಕರು ತಮ್ಮ ದುಡಿಮೆಯನ್ನು ನಂಬಿಕೊಂಡು ಸಾಲ ಮಾಡಿ ದುಡಿಮೆಯಿಲ್ಲದೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.ಜನಪರ ಕಾಳಜಿಯಿಂದ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಆದಷ್ಟು ಬೇಗ ಅನುಮತಿಯನ್ನು ನೀಡಿ ಕಾರ್ಮಿಕ ವರ್ಗಕ್ಕೆ ಧೈರ್ಯ ತುಂಬಬೇಕಾಗಿದೆ ಎಂದವರು ತಿಳಿಸಿದ್ದಾರೆ.

Related posts

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya
error: Content is protected !!