22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

ಬೆಳ್ತಂಗಡಿ: ಕೆಂಪು ಕಲ್ಲು ಮತ್ತು ಮರಳು ಇವೆರಡನ್ನೂ ಉಪಯೋಗಿಸಿಕೊಂಡು ಮಾಡುವ ಕೆಲಸ ಕಾರ್ಯಗಳಿಗೆ ಸಾವಿರಾರು ಕಾರ್ಮಿಕರು ಅವಲಂಬಿತವಾಗಿದ್ದು ಇದೀಗ ಕೆಲಸವಿಲ್ಲದೆ ಟಿಪ್ಪರ್ ಚಾಲಕ-ಮಾಲಕರಿಗೆ ಸಮಸ್ಯೆಯಾಗಿದೆ ಎಂದು ಯುವ ಉದ್ಯಮಿ ಬಳಂಜ ಪ್ರವೀಣ್ ಪೂಜಾರಿ ಹೇಳಿದ್ದಾರೆ.

ಇವುಗಳ ಸಾಗಾಟದ ವಾಹನದ ಮೇಲೆ ಅದೆಷ್ಟು ಸಾಲ ಇನ್ಸುರೆನ್ಸ್, ಟ್ಯಾಕ್ಸ್, ಕಟ್ಟಿ ತಮ್ಮ ವಾಹನಗಳನ್ನು ಮಾಲಕರು ಮನೆಯಲ್ಲಿಯೇ ನಿಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರತಿಯೊಬ್ಬರೂ ಉಪಯೋಗಿಸಲ್ಪಡುವ ಇಂತಹ ಅಗತ್ಯ ವಸ್ತುಗಳ ಮೇಲಾಗಿರುವ ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಮತಿ ನೀಡುವಂತೆ ಕಾನೂನು ಮಾಡಬೇಕಾಗಿರುವುದು ಉತ್ತಮ.ಒಂದು ವೇಳೆ ಅನುಮತಿ ನೀಡಲು ವಿಳಂಬವಾಗಿ ಇದೇ ಪರಿಸ್ಥಿತಿ ಮುಂದುವರೆದರೆ ಅದೆಷ್ಟು ಕೂಲಿ ಕಾರ್ಮಿಕರು, ಮೇಸ್ತ್ರಿ ಕೆಲಸ, ವೈರಿಂಗ್ ಕೆಲಸದವರು,ಹಾರ್ಡ್‌ವೇರ್ ಅಂಗಡಿಯವರು,ಪೈಂಟ್ ಕೆಲಸದವರು, ಇನ್ನು ಹಲವಾರು ಕಾರ್ಮಿಕರು ತಮ್ಮ ದುಡಿಮೆಯನ್ನು ನಂಬಿಕೊಂಡು ಸಾಲ ಮಾಡಿ ದುಡಿಮೆಯಿಲ್ಲದೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.ಜನಪರ ಕಾಳಜಿಯಿಂದ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಆದಷ್ಟು ಬೇಗ ಅನುಮತಿಯನ್ನು ನೀಡಿ ಕಾರ್ಮಿಕ ವರ್ಗಕ್ಕೆ ಧೈರ್ಯ ತುಂಬಬೇಕಾಗಿದೆ ಎಂದವರು ತಿಳಿಸಿದ್ದಾರೆ.

Related posts

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya
error: Content is protected !!