37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

ಗೋವಿಂದೂರು: ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಅಭಿಲಾಷ್ ರವರ ಕುಟುಂಬಕ್ಕೆ ಮಿತ್ರ ಬಳಗ ಗೋವಿಂದೂರು ಯುವಕರ ತಂಡದಿAದ ಆರ್ಥಿಕ ನೆರವು ನೀಡಿದರು.


ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ಸಾಲುಮರ ನಿವಾಸಿ ಶ್ರೀಮತಿ ಸುಮಲ ಪುತ್ರ ಅಭಿಲಾಷ್ (28ವ.) ರವರು ಕಳೆದ ೨೦೧೯ ಬೈಕ್ ಅಪಘಾತವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ರಮೇಣವಾಗಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರು. ಕೆಲವು ಸಮಯದ ನಂತರ ಮೂರ್ಛೆ ಕಾಯಿಲೆ ರೋಗದ ಲಕ್ಷಣ ಕಂಡುಬAದಿದ್ದು ವೈದ್ಯರನ್ನು ಭೇಟಿ ನೀಡಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ಆಗಿದೆ ಎಂದು ವೈದ್ಯರು ತಿಳಿಸಿದರು.
ಮನೆ ಅಧಾರವಾಗಿದ್ದ ಅಭಿಲಾಷ್‌ರವರ ಆರೋಗ್ಯದ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು ವಿಷಯ ತಿಳಿದ ಗೋವಿಂದೂರು ಯುವಕರ ತಂಡದಿಂದ ಆರ್ಥಿಕ ನೆರವು ನೀಡಲಾಯಿತು.


ಈ ಸಂದರ್ಭದಲ್ಲಿ ಮಿತ್ರ ಬಳಗ ಗೋವಿಂದೂರು ಸಂಘದ ಗೌರವಾಧ್ಯಕ್ಷ ಉಮೇಶ್ ಗೋವಿಂದೂರು, ಅಧ್ಯಕ್ಷ ರೋಹಿತ್ ಗೋವಿಂದೂರು, ಉಪಾಧ್ಯಕ್ಷ ಸುರೇಶ್ ಪೆಂರ್ಬುಡ, ಕಾರ್ಯದರ್ಶಿ ರಾಜೇಶ್ ಗೌಡ ಕೆ, ಸಂದೀಪ್ ಗೌಡ ಕೋಜಂಬಲ, ಬಿ.ಜೆ ಪ್ರಶಾಂತ್ ಪಾದೆ ಗುತ್ತು, ಪ್ರಶಾಂತ್ ಕರತ್ತೂರು, ಪುರುಷೋತ್ತಮ ಗೌಡ ಕೈಲಾಜೆ ಉಪಸ್ಥಿತರಿದ್ದರು.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!