September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

ಗೋವಿಂದೂರು: ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಅಭಿಲಾಷ್ ರವರ ಕುಟುಂಬಕ್ಕೆ ಮಿತ್ರ ಬಳಗ ಗೋವಿಂದೂರು ಯುವಕರ ತಂಡದಿAದ ಆರ್ಥಿಕ ನೆರವು ನೀಡಿದರು.


ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ಸಾಲುಮರ ನಿವಾಸಿ ಶ್ರೀಮತಿ ಸುಮಲ ಪುತ್ರ ಅಭಿಲಾಷ್ (28ವ.) ರವರು ಕಳೆದ ೨೦೧೯ ಬೈಕ್ ಅಪಘಾತವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ರಮೇಣವಾಗಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರು. ಕೆಲವು ಸಮಯದ ನಂತರ ಮೂರ್ಛೆ ಕಾಯಿಲೆ ರೋಗದ ಲಕ್ಷಣ ಕಂಡುಬAದಿದ್ದು ವೈದ್ಯರನ್ನು ಭೇಟಿ ನೀಡಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ಆಗಿದೆ ಎಂದು ವೈದ್ಯರು ತಿಳಿಸಿದರು.
ಮನೆ ಅಧಾರವಾಗಿದ್ದ ಅಭಿಲಾಷ್‌ರವರ ಆರೋಗ್ಯದ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು ವಿಷಯ ತಿಳಿದ ಗೋವಿಂದೂರು ಯುವಕರ ತಂಡದಿಂದ ಆರ್ಥಿಕ ನೆರವು ನೀಡಲಾಯಿತು.


ಈ ಸಂದರ್ಭದಲ್ಲಿ ಮಿತ್ರ ಬಳಗ ಗೋವಿಂದೂರು ಸಂಘದ ಗೌರವಾಧ್ಯಕ್ಷ ಉಮೇಶ್ ಗೋವಿಂದೂರು, ಅಧ್ಯಕ್ಷ ರೋಹಿತ್ ಗೋವಿಂದೂರು, ಉಪಾಧ್ಯಕ್ಷ ಸುರೇಶ್ ಪೆಂರ್ಬುಡ, ಕಾರ್ಯದರ್ಶಿ ರಾಜೇಶ್ ಗೌಡ ಕೆ, ಸಂದೀಪ್ ಗೌಡ ಕೋಜಂಬಲ, ಬಿ.ಜೆ ಪ್ರಶಾಂತ್ ಪಾದೆ ಗುತ್ತು, ಪ್ರಶಾಂತ್ ಕರತ್ತೂರು, ಪುರುಷೋತ್ತಮ ಗೌಡ ಕೈಲಾಜೆ ಉಪಸ್ಥಿತರಿದ್ದರು.

Related posts

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
error: Content is protected !!