22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

ಗೋವಿಂದೂರು: ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಅಭಿಲಾಷ್ ರವರ ಕುಟುಂಬಕ್ಕೆ ಮಿತ್ರ ಬಳಗ ಗೋವಿಂದೂರು ಯುವಕರ ತಂಡದಿAದ ಆರ್ಥಿಕ ನೆರವು ನೀಡಿದರು.


ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ಸಾಲುಮರ ನಿವಾಸಿ ಶ್ರೀಮತಿ ಸುಮಲ ಪುತ್ರ ಅಭಿಲಾಷ್ (28ವ.) ರವರು ಕಳೆದ ೨೦೧೯ ಬೈಕ್ ಅಪಘಾತವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ರಮೇಣವಾಗಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರು. ಕೆಲವು ಸಮಯದ ನಂತರ ಮೂರ್ಛೆ ಕಾಯಿಲೆ ರೋಗದ ಲಕ್ಷಣ ಕಂಡುಬAದಿದ್ದು ವೈದ್ಯರನ್ನು ಭೇಟಿ ನೀಡಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ಆಗಿದೆ ಎಂದು ವೈದ್ಯರು ತಿಳಿಸಿದರು.
ಮನೆ ಅಧಾರವಾಗಿದ್ದ ಅಭಿಲಾಷ್‌ರವರ ಆರೋಗ್ಯದ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು ವಿಷಯ ತಿಳಿದ ಗೋವಿಂದೂರು ಯುವಕರ ತಂಡದಿಂದ ಆರ್ಥಿಕ ನೆರವು ನೀಡಲಾಯಿತು.


ಈ ಸಂದರ್ಭದಲ್ಲಿ ಮಿತ್ರ ಬಳಗ ಗೋವಿಂದೂರು ಸಂಘದ ಗೌರವಾಧ್ಯಕ್ಷ ಉಮೇಶ್ ಗೋವಿಂದೂರು, ಅಧ್ಯಕ್ಷ ರೋಹಿತ್ ಗೋವಿಂದೂರು, ಉಪಾಧ್ಯಕ್ಷ ಸುರೇಶ್ ಪೆಂರ್ಬುಡ, ಕಾರ್ಯದರ್ಶಿ ರಾಜೇಶ್ ಗೌಡ ಕೆ, ಸಂದೀಪ್ ಗೌಡ ಕೋಜಂಬಲ, ಬಿ.ಜೆ ಪ್ರಶಾಂತ್ ಪಾದೆ ಗುತ್ತು, ಪ್ರಶಾಂತ್ ಕರತ್ತೂರು, ಪುರುಷೋತ್ತಮ ಗೌಡ ಕೈಲಾಜೆ ಉಪಸ್ಥಿತರಿದ್ದರು.

Related posts

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!