22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಚರ್ಚ್ ಸಮೀಪ ಬೃಹತ್ ಗಾತ್ರದ ಮರ ರಸ್ತೆ ಮತ್ತು ವಿದ್ಯುತ್ ಲೈನ್ ಮೇಲೆ ಉರುಳಿ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಇಂದು (ಜು.2 )ನಡೆದಿದೆ.


ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನಿಂದ ಮುಂಡಾಜೆ ಫೀಡರ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಚ್ ಟಿ ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಮುಂಡಾಜೆ, ಸೋಮಂತಡ್ಕ, ಕಡಂಬಳ್ಳಿ, ಕಾಯರ್ತೋಡಿ, ಕೊಡಂಗೆ,ಕಲ್ಲಾರ್ಯ, ಅಂಬಡ್ತ್ಯಾರು, ನೆಯ್ಯಾಲು, ಮೂಲಾರು, ಕುಡೆಂಚಿ, ಆಸುಪಾಸಿನಲ್ಲಿ ನೂರಾರು ಗ್ರಾಹಕರಿಗೆ ವಿದ್ಯುತ್ ವ್ಯತಯ ಉಂಟಾಗಿದೆ.


ಮರವು ರಸ್ತೆಗೂ ಉರುಳಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ಗ್ರಾಪಂ ಸದಸ್ಯ ಗಣೇಶ ಬಂಗೇರ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಮೆಸ್ಕಾಂ,ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು. ಮರ ಉರುಳಿ ಬೀಳುವ ವೇಳೆ ವಾಹನಗಳ ಸಂಚಾರ ಇರದಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!