23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
error: Content is protected !!