July 23, 2026
ಗ್ರಾಮಾಂತರ ಸುದ್ದಿ

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

ನೆರಿಯ :ಉದಯ ಮಹಾಸಂಘ ಗಂಡಿಬಾಗಿಲು ಇದರ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜು 01ರಂದು ಸಂತ ಥೋಮಸ್ ಚರ್ಚ್ ಸಭಾಂಗಣ ಗಂಡಿಬಾಗಿಲು ಇಲ್ಲಿ ಆಯೋಜಿಸಲಾಗಿತ್ತು

. ಉದಯ ಮಹಾಸಂಘದ ಉಪಾಧ್ಯಕ್ಷರಾದ ಶ್ರೀಮತಿ ಮೇರಿ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ವಂ.ಫಾ. ಜೋಸ್ ಆಯಾಂಕುಡಿ, ಸ್ಥಳೀಯ ಧರ್ಮಗುರುಗಳು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇವರು ಪರಿಸರವನ್ನು ಉಳಿಸಿಕೊಳ್ಳಲು ತೆಗೆದು ಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸ್ನೇಹಜ್ಯೋತಿ ತಾಲೂಕು ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್, ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಎಲಿಯಮ್ಮ ತೋಮಸ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮರಿಯಮ್ಮ ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ನಂತರ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶ್ರೀಮತಿ ಉಷಾ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಮಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya
error: Content is protected !!