23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

ನೆರಿಯ :ಉದಯ ಮಹಾಸಂಘ ಗಂಡಿಬಾಗಿಲು ಇದರ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜು 01ರಂದು ಸಂತ ಥೋಮಸ್ ಚರ್ಚ್ ಸಭಾಂಗಣ ಗಂಡಿಬಾಗಿಲು ಇಲ್ಲಿ ಆಯೋಜಿಸಲಾಗಿತ್ತು

. ಉದಯ ಮಹಾಸಂಘದ ಉಪಾಧ್ಯಕ್ಷರಾದ ಶ್ರೀಮತಿ ಮೇರಿ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ವಂ.ಫಾ. ಜೋಸ್ ಆಯಾಂಕುಡಿ, ಸ್ಥಳೀಯ ಧರ್ಮಗುರುಗಳು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇವರು ಪರಿಸರವನ್ನು ಉಳಿಸಿಕೊಳ್ಳಲು ತೆಗೆದು ಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸ್ನೇಹಜ್ಯೋತಿ ತಾಲೂಕು ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್, ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಎಲಿಯಮ್ಮ ತೋಮಸ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮರಿಯಮ್ಮ ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ನಂತರ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶ್ರೀಮತಿ ಉಷಾ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಮಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
error: Content is protected !!