25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆದಲ್ಲಿ ಕಾರಿನಲ್ಲಿಯೇ ಮಹಿಳೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜು.1ರಂದು ನಡೆದಿದೆ.

ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಎಂಬುವರು ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ದಾರಿ ಮಧ್ಯೆಯೇ ಕಾರಿನಲ್ಲೇ ಮಹಿಳೆಗೆ ಹೆರಿಗೆಯಾದ ಘಟನೆ ವೈದ್ಯರದಿನದಂದು ನಡೆದಿದೆ. ತಾಯಿ ಮಗು ಇಬ್ಬರೂ ಸುರಕ್ಷಿತರಾಗಿದ್ದು ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಆರೈಕೆಯಲ್ಲಿದ್ದಾರೆ.

ಸುನ್ನತ್‌ಕೆರೆ ನಿವಾಸಿ ಇಕ್ಬಾಲ್ ಅವರ ಪತ್ನಿ ತುಂಬು ಗರ್ಬಿಣಿ ಸಫಿಯಾ ಅಳದಂಗಡಿ ಅವರು ತೀವ್ರವಾದ ಹೆರಿಗೆ ನೋವಿನೊಂದಿಗೆ ರಸ್ತೆ ಬದಿನಿಂತುಕೊAಡಿದ್ದರು. ಇದನ್ನು ಗಮನಿಸಿದ ಜಮಾಲ್ ಅವರು ತನ್ನ ಕಾರನ್ನು ತಿರುಗಿಸಿ ಬಂದು ವಿಚಾರಿಸಿದರು. ದಂಪತಿಯ ಸಂಕಷ್ಟ ಅರಿತ ಅವರು ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಕುಳ್ಳಿರಿಸಿ ಆಸ್ಪತ್ರೆಯತ್ತ ಪ್ರಯಾಣ ಬೆಳೆಸಿದರು. ಆದರೆ ಅದಾಗಲೇ ಸಫಿಯಾ ಅವರು ಕಾರಿನಲ್ಲೇ ಪ್ರಸವಿಸಿದ್ದಾರೆ. ಪ್ರಸವದ ವೇಳೆ ಪತಿ ಇಕ್ಬಾಲ್ ಮತ್ತು ಜಮಾಲ್ ಅವರು ಮಹಿಳೆಗೆ ತುರ್ತು ಸ್ಪಂದಿಸಿದ್ದು ಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರ ದಿನದಂದು ಸಫಿಯಾ ಪಾಲಿಗೆ ಪತಿ ಮತ್ತು ಜಮಾಲ್ ವೈದ್ಯರಂತೆ ಕಂಡಿರುವುದು ಸತ್ಯ. ಜಮಾಲ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!