23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

ಬೆಳ್ತಂಗಡಿ: ಕೆಂಪು ಕಲ್ಲು ಮತ್ತು ಮರಳು ಇವೆರಡನ್ನೂ ಉಪಯೋಗಿಸಿಕೊಂಡು ಮಾಡುವ ಕೆಲಸ ಕಾರ್ಯಗಳಿಗೆ ಸಾವಿರಾರು ಕಾರ್ಮಿಕರು ಅವಲಂಬಿತವಾಗಿದ್ದು ಇದೀಗ ಕೆಲಸವಿಲ್ಲದೆ ಟಿಪ್ಪರ್ ಚಾಲಕ-ಮಾಲಕರಿಗೆ ಸಮಸ್ಯೆಯಾಗಿದೆ ಎಂದು ಯುವ ಉದ್ಯಮಿ ಬಳಂಜ ಪ್ರವೀಣ್ ಪೂಜಾರಿ ಹೇಳಿದ್ದಾರೆ.

ಇವುಗಳ ಸಾಗಾಟದ ವಾಹನದ ಮೇಲೆ ಅದೆಷ್ಟು ಸಾಲ ಇನ್ಸುರೆನ್ಸ್, ಟ್ಯಾಕ್ಸ್, ಕಟ್ಟಿ ತಮ್ಮ ವಾಹನಗಳನ್ನು ಮಾಲಕರು ಮನೆಯಲ್ಲಿಯೇ ನಿಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರತಿಯೊಬ್ಬರೂ ಉಪಯೋಗಿಸಲ್ಪಡುವ ಇಂತಹ ಅಗತ್ಯ ವಸ್ತುಗಳ ಮೇಲಾಗಿರುವ ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅನುಮತಿ ನೀಡುವಂತೆ ಕಾನೂನು ಮಾಡಬೇಕಾಗಿರುವುದು ಉತ್ತಮ.ಒಂದು ವೇಳೆ ಅನುಮತಿ ನೀಡಲು ವಿಳಂಬವಾಗಿ ಇದೇ ಪರಿಸ್ಥಿತಿ ಮುಂದುವರೆದರೆ ಅದೆಷ್ಟು ಕೂಲಿ ಕಾರ್ಮಿಕರು, ಮೇಸ್ತ್ರಿ ಕೆಲಸ, ವೈರಿಂಗ್ ಕೆಲಸದವರು,ಹಾರ್ಡ್‌ವೇರ್ ಅಂಗಡಿಯವರು,ಪೈಂಟ್ ಕೆಲಸದವರು, ಇನ್ನು ಹಲವಾರು ಕಾರ್ಮಿಕರು ತಮ್ಮ ದುಡಿಮೆಯನ್ನು ನಂಬಿಕೊಂಡು ಸಾಲ ಮಾಡಿ ದುಡಿಮೆಯಿಲ್ಲದೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.ಜನಪರ ಕಾಳಜಿಯಿಂದ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಆದಷ್ಟು ಬೇಗ ಅನುಮತಿಯನ್ನು ನೀಡಿ ಕಾರ್ಮಿಕ ವರ್ಗಕ್ಕೆ ಧೈರ್ಯ ತುಂಬಬೇಕಾಗಿದೆ ಎಂದವರು ತಿಳಿಸಿದ್ದಾರೆ.

Related posts

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya
error: Content is protected !!