32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

ಗೋವಿಂದೂರು: ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಅಭಿಲಾಷ್ ರವರ ಕುಟುಂಬಕ್ಕೆ ಮಿತ್ರ ಬಳಗ ಗೋವಿಂದೂರು ಯುವಕರ ತಂಡದಿAದ ಆರ್ಥಿಕ ನೆರವು ನೀಡಿದರು.


ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ಸಾಲುಮರ ನಿವಾಸಿ ಶ್ರೀಮತಿ ಸುಮಲ ಪುತ್ರ ಅಭಿಲಾಷ್ (28ವ.) ರವರು ಕಳೆದ ೨೦೧೯ ಬೈಕ್ ಅಪಘಾತವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ರಮೇಣವಾಗಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರು. ಕೆಲವು ಸಮಯದ ನಂತರ ಮೂರ್ಛೆ ಕಾಯಿಲೆ ರೋಗದ ಲಕ್ಷಣ ಕಂಡುಬAದಿದ್ದು ವೈದ್ಯರನ್ನು ಭೇಟಿ ನೀಡಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ಆಗಿದೆ ಎಂದು ವೈದ್ಯರು ತಿಳಿಸಿದರು.
ಮನೆ ಅಧಾರವಾಗಿದ್ದ ಅಭಿಲಾಷ್‌ರವರ ಆರೋಗ್ಯದ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು ವಿಷಯ ತಿಳಿದ ಗೋವಿಂದೂರು ಯುವಕರ ತಂಡದಿಂದ ಆರ್ಥಿಕ ನೆರವು ನೀಡಲಾಯಿತು.


ಈ ಸಂದರ್ಭದಲ್ಲಿ ಮಿತ್ರ ಬಳಗ ಗೋವಿಂದೂರು ಸಂಘದ ಗೌರವಾಧ್ಯಕ್ಷ ಉಮೇಶ್ ಗೋವಿಂದೂರು, ಅಧ್ಯಕ್ಷ ರೋಹಿತ್ ಗೋವಿಂದೂರು, ಉಪಾಧ್ಯಕ್ಷ ಸುರೇಶ್ ಪೆಂರ್ಬುಡ, ಕಾರ್ಯದರ್ಶಿ ರಾಜೇಶ್ ಗೌಡ ಕೆ, ಸಂದೀಪ್ ಗೌಡ ಕೋಜಂಬಲ, ಬಿ.ಜೆ ಪ್ರಶಾಂತ್ ಪಾದೆ ಗುತ್ತು, ಪ್ರಶಾಂತ್ ಕರತ್ತೂರು, ಪುರುಷೋತ್ತಮ ಗೌಡ ಕೈಲಾಜೆ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!