ಗೋವಿಂದೂರು: ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಅಭಿಲಾಷ್ ರವರ ಕುಟುಂಬಕ್ಕೆ ಮಿತ್ರ ಬಳಗ ಗೋವಿಂದೂರು ಯುವಕರ ತಂಡದಿAದ ಆರ್ಥಿಕ ನೆರವು ನೀಡಿದರು.
ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ಸಾಲುಮರ ನಿವಾಸಿ ಶ್ರೀಮತಿ ಸುಮಲ ಪುತ್ರ ಅಭಿಲಾಷ್ (28ವ.) ರವರು ಕಳೆದ ೨೦೧೯ ಬೈಕ್ ಅಪಘಾತವಾಗಿ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕ್ರಮೇಣವಾಗಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರು. ಕೆಲವು ಸಮಯದ ನಂತರ ಮೂರ್ಛೆ ಕಾಯಿಲೆ ರೋಗದ ಲಕ್ಷಣ ಕಂಡುಬAದಿದ್ದು ವೈದ್ಯರನ್ನು ಭೇಟಿ ನೀಡಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ಆಗಿದೆ ಎಂದು ವೈದ್ಯರು ತಿಳಿಸಿದರು.
ಮನೆ ಅಧಾರವಾಗಿದ್ದ ಅಭಿಲಾಷ್ರವರ ಆರೋಗ್ಯದ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆ ಉಂಟಾಗಿದ್ದು ವಿಷಯ ತಿಳಿದ ಗೋವಿಂದೂರು ಯುವಕರ ತಂಡದಿಂದ ಆರ್ಥಿಕ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ಮಿತ್ರ ಬಳಗ ಗೋವಿಂದೂರು ಸಂಘದ ಗೌರವಾಧ್ಯಕ್ಷ ಉಮೇಶ್ ಗೋವಿಂದೂರು, ಅಧ್ಯಕ್ಷ ರೋಹಿತ್ ಗೋವಿಂದೂರು, ಉಪಾಧ್ಯಕ್ಷ ಸುರೇಶ್ ಪೆಂರ್ಬುಡ, ಕಾರ್ಯದರ್ಶಿ ರಾಜೇಶ್ ಗೌಡ ಕೆ, ಸಂದೀಪ್ ಗೌಡ ಕೋಜಂಬಲ, ಬಿ.ಜೆ ಪ್ರಶಾಂತ್ ಪಾದೆ ಗುತ್ತು, ಪ್ರಶಾಂತ್ ಕರತ್ತೂರು, ಪುರುಷೋತ್ತಮ ಗೌಡ ಕೈಲಾಜೆ ಉಪಸ್ಥಿತರಿದ್ದರು.











