July 23, 2026
ಚಿತ್ರ ವರದಿಧಾರ್ಮಿಕವರದಿಸಂಘ-ಸಂಸ್ಥೆಗಳು

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಮಾಸಿಕ ಸಭೆಯು ಜೂ.29ರಂದು ಸಂಘದ ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ರಾಘವೇಂದ್ರ ರವರ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್‌ ಎಚ್‌. ಎಲ್‌. ವಹಿಸಿದ್ದರು.

ತಾಲೂಕು ಮರಾಟಿ ಸಂಘದಿಂದ ಇದೇ ಪ್ರಥಮ ಬಾರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಅ.12ರಂದು ಗುರುವಾಯನಕೆರೆಯ ಹವ್ಯಕ ಭವನದಲ್ಲಿ ನಡೆಸುವುದೆಂದು ನಿರ್ಧರಿಸಲಾಯಿತು. ಅದೇ ದಿನ ವಾರ್ಷಿಕ ಮಹಾಸಭೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಾರ್ಷಿಕ ಮಹಾಸಭೆಯಲ್ಲಿ ಈ ಬಾರಿಯ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚಿಸಲಾಯಿತು. ತಾಲೂಕಿನ ಮರಾಟಿ ಸಮಾಜದ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಸಂಘಕ್ಕೆ ತಮ್ಮ ಅಂಕ ಪಟ್ಟಿಯೊಂದಿಗೆ ಮಾಹಿತಿ ನೀಡುವಂತೆ ವಿನಂತಿಸಲಾಯಿತು.

ಸಭೆಯಲ್ಲಿ ಗೌರವಾಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷರಾದ ವಸಂತ ನಾಯ್ಕ, ಪ್ರಭಾಕರ ನಾಯ್ಕ, ಕಾರ್ಯದರ್ಶಿಗಳಾದ ಸುರೇಶ್ ಎಚ್. ಎಲ್., ಪವಿತ್ರಾ ಲೋಕೇಶ್, ಕೋಶಾಧಿಕಾರಿ ಹರೀಶ್ ಪೆರಾಜೆ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ನಾಯ್ಕ, ಕ್ರೀಡಾ ಕಾರ್ಯದರ್ಶಿ ರವಿ ನಾಯ್ಕ ಬಡಕೋಡಿ, ಮಾಧ್ಯಮ ಕಾರ್ಯದರ್ಶಿ ಶರತ್ ನಾಯ್ಕ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಕಾರ್ಯಕಾರಿ ಸಮಿತಿ ಸದಸ್ಯರಾದ ರಜನೀಶ್ ನಾಯ್ಕ, ಚಂದ್ರಾವತಿ, ವಿಶಾಲ ಹಾಗೂ ಇತರರು ಭಾಗವಹಿಸಿದ್ದರು. ರಾಘವೇಂದ್ರ ನಾಯ್ಕ ಸ್ವಾಗತಿಸಿ, ಶರತ್ ನಾಯ್ಕ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya
error: Content is protected !!