23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಚರ್ಚ್ ಸಮೀಪ ಬೃಹತ್ ಗಾತ್ರದ ಮರ ರಸ್ತೆ ಮತ್ತು ವಿದ್ಯುತ್ ಲೈನ್ ಮೇಲೆ ಉರುಳಿ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಇಂದು (ಜು.2 )ನಡೆದಿದೆ.


ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನಿಂದ ಮುಂಡಾಜೆ ಫೀಡರ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಚ್ ಟಿ ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಮುಂಡಾಜೆ, ಸೋಮಂತಡ್ಕ, ಕಡಂಬಳ್ಳಿ, ಕಾಯರ್ತೋಡಿ, ಕೊಡಂಗೆ,ಕಲ್ಲಾರ್ಯ, ಅಂಬಡ್ತ್ಯಾರು, ನೆಯ್ಯಾಲು, ಮೂಲಾರು, ಕುಡೆಂಚಿ, ಆಸುಪಾಸಿನಲ್ಲಿ ನೂರಾರು ಗ್ರಾಹಕರಿಗೆ ವಿದ್ಯುತ್ ವ್ಯತಯ ಉಂಟಾಗಿದೆ.


ಮರವು ರಸ್ತೆಗೂ ಉರುಳಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ಗ್ರಾಪಂ ಸದಸ್ಯ ಗಣೇಶ ಬಂಗೇರ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಮೆಸ್ಕಾಂ,ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು. ಮರ ಉರುಳಿ ಬೀಳುವ ವೇಳೆ ವಾಹನಗಳ ಸಂಚಾರ ಇರದಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ.

Related posts

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya
error: Content is protected !!