September 6, 2026
Uncategorized

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಚರ್ಚ್ ಸಮೀಪ ಬೃಹತ್ ಗಾತ್ರದ ಮರ ರಸ್ತೆ ಮತ್ತು ವಿದ್ಯುತ್ ಲೈನ್ ಮೇಲೆ ಉರುಳಿ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಇಂದು (ಜು.2 )ನಡೆದಿದೆ.


ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನಿಂದ ಮುಂಡಾಜೆ ಫೀಡರ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಚ್ ಟಿ ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಮುಂಡಾಜೆ, ಸೋಮಂತಡ್ಕ, ಕಡಂಬಳ್ಳಿ, ಕಾಯರ್ತೋಡಿ, ಕೊಡಂಗೆ,ಕಲ್ಲಾರ್ಯ, ಅಂಬಡ್ತ್ಯಾರು, ನೆಯ್ಯಾಲು, ಮೂಲಾರು, ಕುಡೆಂಚಿ, ಆಸುಪಾಸಿನಲ್ಲಿ ನೂರಾರು ಗ್ರಾಹಕರಿಗೆ ವಿದ್ಯುತ್ ವ್ಯತಯ ಉಂಟಾಗಿದೆ.


ಮರವು ರಸ್ತೆಗೂ ಉರುಳಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ಗ್ರಾಪಂ ಸದಸ್ಯ ಗಣೇಶ ಬಂಗೇರ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಮೆಸ್ಕಾಂ,ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು. ಮರ ಉರುಳಿ ಬೀಳುವ ವೇಳೆ ವಾಹನಗಳ ಸಂಚಾರ ಇರದಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya
error: Content is protected !!