July 23, 2026
Uncategorized

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಚರ್ಚ್ ಸಮೀಪ ಬೃಹತ್ ಗಾತ್ರದ ಮರ ರಸ್ತೆ ಮತ್ತು ವಿದ್ಯುತ್ ಲೈನ್ ಮೇಲೆ ಉರುಳಿ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಇಂದು (ಜು.2 )ನಡೆದಿದೆ.


ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನಿಂದ ಮುಂಡಾಜೆ ಫೀಡರ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಚ್ ಟಿ ವಿದ್ಯುತ್ ಕಂಬಗಳು ತುಂಡಾದ ಪರಿಣಾಮ ಮುಂಡಾಜೆ, ಸೋಮಂತಡ್ಕ, ಕಡಂಬಳ್ಳಿ, ಕಾಯರ್ತೋಡಿ, ಕೊಡಂಗೆ,ಕಲ್ಲಾರ್ಯ, ಅಂಬಡ್ತ್ಯಾರು, ನೆಯ್ಯಾಲು, ಮೂಲಾರು, ಕುಡೆಂಚಿ, ಆಸುಪಾಸಿನಲ್ಲಿ ನೂರಾರು ಗ್ರಾಹಕರಿಗೆ ವಿದ್ಯುತ್ ವ್ಯತಯ ಉಂಟಾಗಿದೆ.


ಮರವು ರಸ್ತೆಗೂ ಉರುಳಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ಗ್ರಾಪಂ ಸದಸ್ಯ ಗಣೇಶ ಬಂಗೇರ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು, ಮೆಸ್ಕಾಂ,ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಸಹಕರಿಸಿದರು. ಮರ ಉರುಳಿ ಬೀಳುವ ವೇಳೆ ವಾಹನಗಳ ಸಂಚಾರ ಇರದಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya
error: Content is protected !!