23.5 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!