25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ತುಳು ಸಾಹಿತ್ಯ ಅಕಾಡೆಮಿಯಲ್ಲಿ ಪ್ರಶಸ್ತಿ ವಿತರಣೆ ಶಿಕ್ಷಕಿಗೆ ಸನ್ಮಾನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!