September 6, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!