July 23, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ – ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ


ಬೆಳ್ತಂಗಡಿ :ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸುವಲ್ಲಿ ಪಠ್ಯಚಟುವಟಿಕೆಗಳಿಗೆ ಪೂರಕವಾಗಿ ಯಕ್ಷಗಾನ ಕಲಿಕೆಯು ಪ್ರಯೋಜನಕಾರಿಯಾಗಿದೆ ಎಂದು ಪಟ್ಲ ಪೌಂಡೇಷನ್ ನ ಟ್ರಸ್ಟ್ರಿಗಳಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷದ್ರುವ- ಯಕ್ಷ ಶಿಕ್ಷಣ ನಾಟ್ಯ ತರಬೇತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನವು ಆರೋಗ್ಯ ಮತ್ತು ನೆಮ್ಮದಿಯನ್ನು ಪಡೆಯಲು ಸಹಕಾರಿಯಾಗಿದೆ. ಪಟ್ಲ ಪೌಂಡೇಶ್ ನವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಯಕ್ಷಗಾನವನ್ನು ಕಲಿಸುವ ಯೋಜನೆ ಶ್ಲಾಘನೀಯ. ಅವರ ಪರಿಶ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರೊಂದಿಗೆ ಪೋಷಕರಿಗೆ,ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಪೌಂಡೇಶನ್ ನ ಯಕ್ಷದ್ರುವ- ಯಕ್ಷ ಶಿಕ್ಷಣದ ಕೇಂದ್ರೀಯ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಮುಖ್ಯ ಅತಿಥಿಗಳಾಗಿದ್ದು ಯಕ್ಷದ್ರುವ ಪಟ್ಲ ಪೌಂಡೇಶನ್ ನ ಧ್ಯೇಯೋಧ್ಧೇಶಗಳನ್ನು ತಿಳಿಸುತ್ತಾ, ವಿದ್ಯಾರ್ಥಿಗಳಲ್ಲಿ ಉತ್ತಮ ಜ್ಞಾನ,ಆಚಾರ- ವಿಚಾರ ಸಂಸ್ಕಾರಕ್ಕೆ ಪೂರಕವಾಗಿ ಯಕ್ಷಗಾನದ ಕಲಿಕೆಯು ಮಹತ್ವದ್ದಾಗಿದೆ ಎಂದರು. ಯಕ್ಷಗಾನ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ ಉಪಸಿತರಿದ್ದರು.
ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!