24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ದೇವಳಕ್ಕೆ ವಂಚಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ನೀಡಿದ ದೂರಿನಂತೆ ಕೆನರಾ ಬ್ಯಾಂಕ್‌ನ ಕೊಕ್ಕಡ ಶಾಖಾ ಸಿಬ್ಬಂದಿ ಗಣೇಶ್ ನಾಯ್ಕ್ ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಜೂ.20ರಂದು ಬೆಳಿಗ್ಗೆ ದೇವಸ್ಥಾನದ ಸಮಿತಿ ಸದಸ್ಯರ ಸಮಕ್ಷಮ ದೇವಳದ ಕಾರ್ಯನಿರ್ವಹಣಾಧಿಕಾರಿ, ಕೆನರಾ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಾದ ಮ್ಯಾಥ್ಯು, ಗಣೇಶ ನಾಯ್ಕ ಹಾಗೂ ಜಿಲ್ಲಾಧಿಕಾರಿಯವರ ಆದೇಶದನ್ವಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಜಿಲ್ಲಾಧಿಕಾರಿಯವರ ಕಚೇರಿಯಿಂದ ನಿಯೋಜಿತರಾದ ಸಿಬ್ಬಂದಿ ಹಾಗೂ ದೇವಸ್ಥಾನದ ವತಿಯಿಂದ ಕರೆಸಲ್ಪಟ್ಟ ಸುಮಾರು 42 ಜನ ಸ್ವಯಂ ಸೇವಕರು ಹಾಗೂ ಶ್ರೀ ದೇವಾಲಯದ 20ಕ್ಕೂ ಹೆಚ್ಚಿನ ಸಿಬ್ಬಂದಿಗಳೊಂದಿಗೆ ಹುಂಡಿ ಎಣಿಕೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಅಲ್ಲಿ ಸೇರಿದ ಎಲ್ಲರೂ ರೂ.500, 200, 100, 50,20 ಮತ್ತು 10ರ ನೋಟುಗಳನ್ನು ವರ್ಗಾವಾರು ವಿಂಗಡಣೆ ಮಾಡಿ ಜೋಡಿಸಿ ಇಡುವ ಕೆಲಸ ಮಾಡಿದ್ದು, ಆ ಸಮಯ ಗಣೇಶ ನಾಯ್ಕ್ ಹುಂಡಿ ಕಾಣಿಕೆ ಹಣದ ಎಣಿಕೆಯ ಸಂದರ್ಭದಲ್ಲಿ ಕೆಲವೊಂದು ನೋಟುಗಳನ್ನು ಬಂಡಲ್‌ಗೆ ಹೆಚ್ಚು ಸೇರಿಸುತ್ತಿರುವ ಬಗ್ಗೆ ಸಂಶಯ ಬಂದ ಹಿನ್ನೆಲೆಯಲ್ಲಿ ಲೆಕ್ಕ ಮಾಡಿ ಪ್ಯಾಕ್ ಮಾಡಿಟ್ಟ ಹಣದ ಒಂದು ಬಂಡಲ್ ತೆಗೆದು ಎಣಿಸಿದಾಗ ಅದರಲ್ಲಿ ಹೆಚ್ಚುವರಿ ನೋಟುಗಳು ಇದ್ದು ಬಳಿಕ ಲೆಕ್ಕ ಮಾಡಿ ಇಟ್ಟ ಎಲ್ಲಾ ಹಣದ ಬಂಡಲ್‌ಗಳನ್ನು ತೆಗೆದು ಎಣಿಸಿದಾಗ ಒಟ್ಟು 40 ಸಾವಿರ ರೂ.ಹೆಚ್ಚುವರಿ ಹಣ ಇರುವುದು ಪತ್ತೆಯಾಗಿದೆ. ಅಪಾದಿತ ಗಣೇಶ್ ನಾಯ್ಕ್ ಈ ರೀತಿಯಾಗಿ ದೇವಳಕ್ಕೆ ವಂಚಿಸುವ ಮೂಲಕ ಅಪರಾಧ ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿರುವುದು ಕಂಡು ಬರುತ್ತದೆ ಎಂದು ಸುಬ್ರಹ್ಮಣ್ಯ ಶಬರಾಯ ಅವರು ದೂರು ನೀಡಿದ್ದರು. ಈ ದೂರಿನಂತೆ ಧರ್ಮಸ್ಥಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya
error: Content is protected !!