24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಲಯ ಅರಣ್ಯ ಇಲಾಖೆ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ
ಇವರ ಸಂಯುಕ್ತ ಆಶ್ರಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಯೋಗದೊಂದಿಗೆ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.


ಶಾಲಾಭಿವೃಧ್ದಿ ಸಮಿತಿ ಸದಸ್ಯೆ ಶ್ರೀಮತಿ ಸುಂದರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ತಾಲೂಕು ಯೋಜನಾಧಿಕಾರಿ ಯಶೋಧರರವರು ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸುವ ಕಾರ್ಯ ಮನೆಯಿಂದಲೇ ಪ್ರಾರಂಭವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಂಜುಳಾ ,ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ , ವಲಯ ಮೇಲ್ವಿಚಾರki ಶ್ರೀಮತಿ ಶಶಿಕಲಾ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀಮತಿ ಮಂಜುಳಾ ಕಾರಂತ್, ಅರಸಿನಮಕ್ಕಿ ಶೌರ್ಯ ಘಟಕದ ಅವಿನಾಶ್ ಭಿಡೆ ಉಪಸ್ಥಿತರಿದ್ದರು.


ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕುಮಾರಿ ಮಾನಸ ಮತ್ತು ತಂಡ ಪ್ರಾರ್ಥಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಕನ್ನಡ ಶಿಕ್ಷಕಿ ದಿವ್ಯಾ ವಾಚಿಸಿದರು.
ದೈಹಿಕ ಶಿಕ್ಷಣ ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು. ರಾಮ್ ಕುಮಾರ್ ವಂದನಾರ್ಪಣೆಗೈದರು. ವಿಜ್ಞಾನ ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು.


ಬಳಿಕ ಶೌರ್ಯ ತಂಡ ಹಾಗೂ ಊರವರಿಂದ ಶಾಲಾ ಆವರಣದಲ್ಲಿ ಗಿಡ ನಾಟಿ ನಡೆಯಿತು.ಆಂಗ್ಲ ಭಾಷಾ ಶಿಕ್ಷಕಿ ಚೇತನಾ ,
ಸೇವಾಪ್ರತಿನಿಧಿಗಳಾದ ಯಮುನಾ, ರೂಪಾ, ಸ್ವಚ್ಚತಾ ಸೇನಾನಿ ಸರೋಜಿನಿ , ಮುಂಡಾಜೆಯ ಸಚಿನ್ ಭಿಡೆ ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು, ಯೋಜನೆಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!