July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

ಕನ್ಯಾಡಿ 2: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು.

ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕಿ ಕುಮಾರಿ ಅನನ್ಯ ಮತ್ತು ಉಪ ನಾಯಕ ಕುಮಾರ್ ಸುಹಾಸ್ ಹಾಗೂ ಮಂತ್ರಿಮಂಡಲದ ಸರ್ವ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು.

ಶಾಲೆಯ ಕರ್ತವ್ಯ, ಶಿಸ್ತು, ಜವಾಬ್ದಾರಿ ಸರಿಯಾಗಿ ನಿಭಾಯಿಸುವುದಾಗಿ ಪ್ರತಿಜ್ಞೆ ಮಾಡಿದರು. ಈ ಪ್ರತಿಜ್ಞಾವಿಧಿಯನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಶಾರದಾ ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದದವರು ಪ್ರಮಾಣವಚನ ಕೈಗೊಂಡ ಮಕ್ಕಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya
error: Content is protected !!