25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

ಬೆಳ್ತಂಗಡಿ: ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.

ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ವಿದ್ಯುತ್ ಪರಿವರ್ತಕದ ಸಮೀಪ ತೋಟದಲ್ಲಿ ಹಾದು ಹೋಗಿದ್ದ ಎಲ್ ಟಿ ಲೈನ್ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುoಡಾಗಿ ನೀರು ಹರಿಯುವ ಹಳ್ಳಕ್ಕೆ ಬಿದ್ದಿತ್ತು. ಆ ತಂತಿಯಲ್ಲಿ ವಿದ್ಯುತ್ ಸರಬರಾಜಾಗುವ ಫ್ಯೂಸ್ ಹೋಗಿರುವುದು ಕಂಡು ಬಂದಿದ್ದು, ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತಿದ್ದ ವೀರಪ್ಪ, ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ಅಡಿಕೆ, ತೆoಗಿನಕಾಯಿಯನ್ನು ಹೆಕ್ಕಲು ಇಳಿದಿದ್ದು,ಅಲ್ಲಿಯೇ ಬಿದ್ದಿದ್ದ ವಿದ್ಯುತ್ ತಂತಿಯನ್ನು ಬಳ್ಳಿ ಎಂದು ಬರಿ ಕೈಯಲ್ಲಿ ಹಿಡಿದು ಎಳೆದಾಗ, ವಿದ್ಯುತ್ ತಂತಿಯು ಕಂಬದಲ್ಲಿರುವ ಇನ್ನೊಂದು ತಂತಿಗೆ ತಾಗಿ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತ ಪಟ್ಟಿರುವ ಸಾಧ್ಯತೆ ಇದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

ವೇಣೂರು ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!