July 23, 2026
ಗ್ರಾಮಾಂತರ ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

ಧರ್ಮಸ್ಥಳ : ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಹಯೋಗದಲ್ಲಿ ನಾಟಕ ಯಕ್ಷಗಾನ ಸೆಮಿ ಕ್ಲಾಸಿಕಲ್ ಹಾಗೂ ಪಶ್ಚಿಮಾತ್ಯ ಶೈಲಿಯ ನೃತ್ಯ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಂಚಾಲಕಿ ತೃಪ್ತ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಲಾಕೇಂದ್ರದ ವತಿಯಿಂದ ನಿರ್ವಹಿಸುವ ಈ ತರಭೇತಿಯ ಸದುಪಯೋಗಪಡಿಸಿಕೊಳ್ಳಿ, ಹಾಗೂ ಈ ಎಲ್ಲಾ ತರಬೇತಿಗಳ ಪ್ರಯೋಜನ ಏನು ಇತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವಕಾಶವನ್ನು ಬಳಸುವ ಬಗ್ಗೆ,ಪ್ರತಿಭೆಗೆ ನೀರೆರೆದು ಪೋಷಿಸುವ ಬಗ್ಗೆ, ಪಠ್ಯೇತರ ಚಟುವಟಿಕೆಗಳ ಅಗತ್ಯ ಹಾಗೂ ಅವುಗಳ ಪ್ರಯೋಜನ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಗತ್ಯಗಳನ್ನು ವಿವರಿಸಿದರು. ತೇಜಸ್ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ಅನುಜ್ಞಾ ಸ್ವಾಗತಿಸಿ, ಕುಮಾರಿ ಕಲ್ಪಿತ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಯಕ್ಷಗಾನ ತರಬೇತಿದಾರರಾಗಿ ಅರುಣ್ ಕುಮಾರ್, ನಾಟಕ ತರಬೇತಿದಾರರಾಗಿ ಯಶವಂತ್ ಬೆಳ್ತಂಗಡಿ, ಪಾಶ್ಚಿಮಾತ್ಯ ನೃತ್ಯ ತರಬೇತಿದಾರರಾಗಿ ವಿನ್ಯಾಸ್, ಸೆಮಿ ಕ್ಲಾಸಿಕಲ್ ನೃತ್ಯ ತರಬೇತುದಾರರಾಗಿ ಶ್ರೀಮತಿ ಚೈತ್ರ,ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!