September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

ಬೆಳ್ತಂಗಡಿ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ರವರು ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜು. 2 ರಂದು ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸರ್ಕಾರದಿಂದ ಮಂಜೂರಾಗಿರುವ ಅನುದಾನದ ವಿಚಾರದಲ್ಲಿ ಬೆಳ್ತಂಗಡಿಯ ನ್ಯಾಯಾಧೀಶರು ಮತ್ತು ವಕೀಲರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ರವರು ನೂತನ ನ್ಯಾಯಾಲಯದ ಸಂಕೀರ್ಣವನ್ನು ಈಗ ಇರುವ 60 ವರ್ಷ ಹಳೆಯದಾದ ಕಟ್ಟಡ ಇರುವ ಜಾಗದಲ್ಲಿಯೇ ನಿರ್ಮಿಸುವರೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿ ಆ ಬಗ್ಗೆ ಸಂಘದ ಪರವಾಗಿ ಮನವಿ ಸಲ್ಲಿಸಿದರು.

ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್ ರವರು ಮಾತನಾಡುತ್ತಾ ವಕೀಲರ ಸಂಘದ ಮನವಿಯಂತೆ ಹೈಕೋರ್ಟ್ ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವುದಾಗಿ ಭರವಸೆ ನೀಡಿ ಜು. 12 ರಂದು ನಡೆಯುವ ಲೋಕ ಅದಾಲತ್ ನಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳನ್ನು ರಾಜಿ ಪಂಚಾಯತಿಕೆ ಮೂಲಕ ಇತ್ಯರ್ಥಪಡಿಸುವಂತೆ ಅವರು ವಕೀಲರಲ್ಲಿ ಮನವಿ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ, ಪ್ರಧಾನ ಹಿರಿಯ ಸಿವಿಲ್ ಮತ್ತು
ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಮನು ಬಿ. ಕೆ, ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಸಂದೇಶ್,
ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ ಎಚ್, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಉಪಸ್ಥಿತರಿದ್ದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಹೆಚ್ಚುವರಿ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya
error: Content is protected !!