22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜು.10 ರಿಂದ ಆ.20ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ಕೋನಳ್ಳಿಯ ಶ್ರೀ ವನದುರ್ಗಾ ದೇವಾಲಯದಲ್ಲಿ ನಡೆಯಲಿದೆ.


ಜು.10 ಗುರುವಾರ ಗುರುಪೂರ್ಣಿಮೆ ಯಂದು ವನದುರ್ಗಾ ದೇವಾಲಯದಲ್ಲಿ ಬೆಳಿಗ್ಗೆ 7.೦೦ ಗಂಟೆಯಿಂದ 9.೦೦ ಗಂಟೆಯವರೆಗೆ ಚಾತುರ್ಮಾಸ್ಯ ವ್ರತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ಹಾಗೂ ವೈದಿಕ ವಿಧಿ-ವಿಧಾನಗಳು ನೆರವೇರಲಿದೆ. ಕುಮುಟಾ ನಾಮಧಾರಿ ಸಭಾಭವನದ ಆವರಣದಲ್ಲಿರುವ ಶ್ರೀ ವೆಂಕಟ್ರಮಣ ದೇವರಿಗೆ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಶ್ರೀಗಳ ಪುರಪ್ರವೇಶದ ಭವ್ಯ ಮೆರವಣಿಗೆ ಪ್ರಾರಂಭಗೊಳ್ಳಲಿದೆ.


ದಿನಂಪ್ರತಿ ಹೆಸರಾಂತ ಕಲಾ ತಂಡಗಳಿಂದ ಭರತನಾಟ್ಯ ವೈಭವ, ಗೀತಾರೂಪಕ, ತಾಳೆಗರಿ ರಾಮಾಯಣ ಪಠಣ, ಕುಂಚ ಗೀತಾ ರಾಮ ಕಥಾ, ಸುಗಮ ಸಂಗೀತ, ಭಜನೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಗುರುಪೂಜೆ, ಅನ್ನಸಂತರ್ಪಣೆ ಜರುಗಲಿದೆ.

Related posts

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!