22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ ‘ಮಂಗಳೂರು ಸಮಾಚಾರ’ ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಕರ್ನಾಟಕದಲ್ಲಿ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.೫ರಂದು ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಪತ್ರಿಕಾ ದಿನಾಚರಣೆ- 2025 ಜರುಗಲಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮ ಉದ್ಘಾಟಿಸಲಿರುವರು,ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಮಂಗಳೂರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸುವರು. ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಉಪನ್ಯಾಸ ನೀಡಲಿದ್ದಾರೆ.

ಈ ಸಂದರ್ಭದಲ್ಲಿ 2024-25ನೇ ಸಾಲಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ.ಜೊತೆಗೆ ಅಸೌಖ್ಯದಿಂದ ಬಳಲುತ್ತಿರುವವರಿಗೆ ದಿತಿ ಸಾಂತ್ವನ ನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya
error: Content is protected !!