ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

ಬೆಳ್ತಂಗಡಿ: ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.

ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ವಿದ್ಯುತ್ ಪರಿವರ್ತಕದ ಸಮೀಪ ತೋಟದಲ್ಲಿ ಹಾದು ಹೋಗಿದ್ದ ಎಲ್ ಟಿ ಲೈನ್ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುoಡಾಗಿ ನೀರು ಹರಿಯುವ ಹಳ್ಳಕ್ಕೆ ಬಿದ್ದಿತ್ತು. ಆ ತಂತಿಯಲ್ಲಿ ವಿದ್ಯುತ್ ಸರಬರಾಜಾಗುವ ಫ್ಯೂಸ್ ಹೋಗಿರುವುದು ಕಂಡು ಬಂದಿದ್ದು, ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತಿದ್ದ ವೀರಪ್ಪ, ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ಅಡಿಕೆ, ತೆoಗಿನಕಾಯಿಯನ್ನು ಹೆಕ್ಕಲು ಇಳಿದಿದ್ದು,ಅಲ್ಲಿಯೇ ಬಿದ್ದಿದ್ದ ವಿದ್ಯುತ್ ತಂತಿಯನ್ನು ಬಳ್ಳಿ ಎಂದು ಬರಿ ಕೈಯಲ್ಲಿ ಹಿಡಿದು ಎಳೆದಾಗ, ವಿದ್ಯುತ್ ತಂತಿಯು ಕಂಬದಲ್ಲಿರುವ ಇನ್ನೊಂದು ತಂತಿಗೆ ತಾಗಿ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತ ಪಟ್ಟಿರುವ ಸಾಧ್ಯತೆ ಇದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

ವೇಣೂರು ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya
error: Content is protected !!