25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಜಿಯಿಂದ ಎರಡನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಅಶ್ವಿನಿ ಹೆಚ್ ಆಗಮಿಸಿ ಮಕ್ಕಳ ದೈಹಿಕ ಬೆಳವಣಿಗೆಗೆ ಬೇಕಾದ ಆಹಾರ ಕ್ರಮ, ಮಕ್ಕಳ ಮಾನಸಿಕ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳು, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಎಷ್ಟು ಮುಖ್ಯ ಎಂಬುದರ ಕುರಿತಾಗಿ ಸವಿವರವಾದ ಮಾಹಿತಿಯನ್ನು ಪೋಷಕರಿಗೆ ನೀಡಿದರು.

ಕರಡಿಪಾಥ್ ತರಗತಿಗಳ ತರಬೇತುದಾರ ನಿಖಿಲ್ ಅವರು ಕರಡಿಪಾಥ್ ತರಗತಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು,. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ರವರು ಶಾಲಾ ರೀತಿ ನೀತಿಗಳನ್ನು ವಿವರಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮಕ್ಕಳನ್ನು ಕಬ್ ಬುಲ್ ಬುಲ್ ದಳಕ್ಕೆ ಸೇರಿಸುವ ಕುರಿತಾಗಿ ಶಾಲೆಯ ಫ್ಲಾಕ್ ಲೀಡರ್ ಸೌಮ್ಯ ಮಾಹಿತಿ ನೀಡಿದರು. ಪುಟಾಣಿ ಮಕ್ಕಳ ಕಾಳಜಿಗಳ ಕುರಿತಾಗಿ ಹಾಗೂ ಬನ್ನಿ ದಳದ ಬಗ್ಗೆ ಶ್ರೀಮತಿ ಪ್ರೀತಿ ತಿಳಿ ಹೇಳಿದರು. ತರಗತಿ ಶಿಕ್ಷಕರುಗಳು ತಮ್ಮ ಪರಿಚಯವನ್ನು ಪೋಷಕರಿಗೆ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಗೀತಾ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರೀತಿ ವಂದಿಸಿದರು.

Related posts

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya
error: Content is protected !!