September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

ಬೆಳ್ತಂಗಡಿ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ರವರು ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜು. 2 ರಂದು ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸರ್ಕಾರದಿಂದ ಮಂಜೂರಾಗಿರುವ ಅನುದಾನದ ವಿಚಾರದಲ್ಲಿ ಬೆಳ್ತಂಗಡಿಯ ನ್ಯಾಯಾಧೀಶರು ಮತ್ತು ವಕೀಲರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ರವರು ನೂತನ ನ್ಯಾಯಾಲಯದ ಸಂಕೀರ್ಣವನ್ನು ಈಗ ಇರುವ 60 ವರ್ಷ ಹಳೆಯದಾದ ಕಟ್ಟಡ ಇರುವ ಜಾಗದಲ್ಲಿಯೇ ನಿರ್ಮಿಸುವರೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿ ಆ ಬಗ್ಗೆ ಸಂಘದ ಪರವಾಗಿ ಮನವಿ ಸಲ್ಲಿಸಿದರು.

ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್ ರವರು ಮಾತನಾಡುತ್ತಾ ವಕೀಲರ ಸಂಘದ ಮನವಿಯಂತೆ ಹೈಕೋರ್ಟ್ ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವುದಾಗಿ ಭರವಸೆ ನೀಡಿ ಜು. 12 ರಂದು ನಡೆಯುವ ಲೋಕ ಅದಾಲತ್ ನಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳನ್ನು ರಾಜಿ ಪಂಚಾಯತಿಕೆ ಮೂಲಕ ಇತ್ಯರ್ಥಪಡಿಸುವಂತೆ ಅವರು ವಕೀಲರಲ್ಲಿ ಮನವಿ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ, ಪ್ರಧಾನ ಹಿರಿಯ ಸಿವಿಲ್ ಮತ್ತು
ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಮನು ಬಿ. ಕೆ, ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಸಂದೇಶ್,
ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ ಎಚ್, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಉಪಸ್ಥಿತರಿದ್ದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಹೆಚ್ಚುವರಿ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ವಂದಿಸಿದರು.

Related posts

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!