25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

ಬೆಳ್ತಂಗಡಿ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ರವರು ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜು. 2 ರಂದು ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸರ್ಕಾರದಿಂದ ಮಂಜೂರಾಗಿರುವ ಅನುದಾನದ ವಿಚಾರದಲ್ಲಿ ಬೆಳ್ತಂಗಡಿಯ ನ್ಯಾಯಾಧೀಶರು ಮತ್ತು ವಕೀಲರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ರವರು ನೂತನ ನ್ಯಾಯಾಲಯದ ಸಂಕೀರ್ಣವನ್ನು ಈಗ ಇರುವ 60 ವರ್ಷ ಹಳೆಯದಾದ ಕಟ್ಟಡ ಇರುವ ಜಾಗದಲ್ಲಿಯೇ ನಿರ್ಮಿಸುವರೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿ ಆ ಬಗ್ಗೆ ಸಂಘದ ಪರವಾಗಿ ಮನವಿ ಸಲ್ಲಿಸಿದರು.

ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್ ರವರು ಮಾತನಾಡುತ್ತಾ ವಕೀಲರ ಸಂಘದ ಮನವಿಯಂತೆ ಹೈಕೋರ್ಟ್ ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವುದಾಗಿ ಭರವಸೆ ನೀಡಿ ಜು. 12 ರಂದು ನಡೆಯುವ ಲೋಕ ಅದಾಲತ್ ನಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳನ್ನು ರಾಜಿ ಪಂಚಾಯತಿಕೆ ಮೂಲಕ ಇತ್ಯರ್ಥಪಡಿಸುವಂತೆ ಅವರು ವಕೀಲರಲ್ಲಿ ಮನವಿ ಮಾಡಿದರು.

ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ, ಪ್ರಧಾನ ಹಿರಿಯ ಸಿವಿಲ್ ಮತ್ತು
ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಮನು ಬಿ. ಕೆ, ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಸಂದೇಶ್,
ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ ಎಚ್, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಉಪಸ್ಥಿತರಿದ್ದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಹೆಚ್ಚುವರಿ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ವಂದಿಸಿದರು.

Related posts

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!